Friday, September 12, 2025
HomeUncategorizedಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರಿನಲ್ಲಿ ಕಣ್ಮರೆ

ಪ್ರವಾಸಕ್ಕೆ ಬಂದಿದ್ದ ನಾಲ್ವರು ನೀರಿನಲ್ಲಿ ಕಣ್ಮರೆ

ಕಾರವಾರ : ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಮುಳುಗಡೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಾಗಾಲ್​ನಲ್ಲಿ ನಡೆದಿದೆ.

ಬೆಂಗಳೂರಿನಿಂದ 87 ವಿದ್ಯಾರ್ಥಿಗಳು ಕುಮಟ ಪ್ರವಾಸಕ್ಕೆ ಬಂದಿದ್ದರು. ಕುಮಟಾದ ಸಿಲವರ್ ಸ್ಯಾಂಡ್ ರೆಸಾರ್ಟನಲ್ಲಿ ಬಂದಿಳಿದಿದ್ದರು. ಸಮುದ್ರದಲ್ಲಿ ಈಜಾಡುವ ವೇಳೆ ಅಲೆಗೆ ಸಿಲುಕಿದ್ದ ನಾಲ್ವರು ನೀರಿನಲ್ಲಿ ಮುಳುಗಡೆಯಾಗಿದ್ದಾರೆ. ನೀರುಪಾಲಾಗಿದ್ದ ಇಬ್ಬರ ಇಬ್ಬರೂ ವಿಧ್ಯಾರ್ಥಿಗಳ ಶವ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಬೆಂಗಳೂರು ಮೂಲದ ಅರ್ಜುನ್ , ಚೈತ್ರ ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟಿದ್ದು, ಮೃತ ಚೈತ್ರ ದೇಹ ಪತ್ತೆ, ಮೃತ ಅರ್ಜುನ್ ದೇಹಕ್ಕಾಗಿ ಹುಡುಕಾಟವನ್ನು ನಡೆಸುತ್ತಿದ್ದು, ಅಗ್ನಿಶಾಮಕ ದಳದಿಂದ ಶೋಧಕಾರ್ಯ ಮುಂದುವರೆದಿದೆ.

RELATED ARTICLES
- Advertisment -
Google search engine

Most Popular

Recent Comments