Sunday, September 14, 2025
HomeUncategorizedಜುಲೈ 29 ಮಂಡ್ಯ ಬಂದ್​..!

ಜುಲೈ 29 ಮಂಡ್ಯ ಬಂದ್​..!

ಮಂಡ್ಯ : ಪ್ರವಾಸಿ ಮಂದಿರದಲ್ಲಿ ಇಂದು KRS ಉಳಿಸಿ ಜನಾಂದೋಲನ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಎಲ್ಲಾ ಸಂಘಟನೆಗಳು ಜುಲೈ 29ರಂದು ಮಂಡ್ಯ ನಗರವನ್ನ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಿದವು.
ಜಿಲ್ಲೆಯಲ್ಲಿ ಅದರಲ್ಲೂ ಕೆ.ಆರ್.ಎಸ್ ಸುತ್ತಮುತ್ತ ಹಾಗೂ ಬೇಬಿ ಬೆಟ್ಟ ವ್ಯಾಪ್ತಿಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಕನ್ನಂಬಾಡಿ ಅಣೆಕಟ್ಟೆಗೆ ಧಕ್ಕೆಯಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿ ನೀಡಿದೆ. ಆದರೂ ಸರ್ಕಾರ ಮತ್ತು ಜಿಲ್ಲಾಡಳಿತ ಗಣಿ ಮಾಲೀಕರ ಪ್ರಭಾವಕ್ಕೆ ಮಣಿದು ಗಣಿಗಾರಿಕೆಗೆ ಅನುಮತಿ ನೀಡುತ್ತಲೇ ಬಂದಿವೆ.
ಕಲ್ಲು ಗಣಿಗಾರಿಕೆಗೆ ನಿಷೇಧಿತ ಸ್ಫೋಟಕಗಳು ಹಾಗೂ ಮೆಗ್ಗರ್ ಬ್ಲಾಸ್ಟ್ ನಿಂದ ಬಂಡೆಗಳನ್ನು ಸಿಡಿಸುತ್ತಿರೋದು ಕನ್ನಂಬಾಡಿ ಅಣೆಕಟ್ಟೆಯ ಅವನತಿಗೆ ಕಾರಣವಾಗಿದೆ.  ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟೆಗೆ ಧಕ್ಕೆಯಾದರೆ, ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರಿಗೆ ದೊಡ್ಡ ಜಲ ಗಂಡಾಂತರ ಎದುರಾಗಲಿದೆ.
ಹಾಗಾಗಿ, ಕೆ.ಆರ್.ಎಸ್ ಸುತ್ತಮುತ್ತಲಿನ 20 ಕಿ.ಮೀ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಎಲ್ಲಾ ರೀತಿಯ ಕಲ್ಲು ಗಣಿಗಾರಿಕೆಯನ್ನ ಸಂಪೂರ್ಣವಾಗಿ ನಿಷೇಧಿಸಬೇಕು. ಆ ಮೂಲಕ ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟೆ ಉಳಿಸಬೇಕು ಎಂದು ಒತ್ತಾಯಿಸಿ ಮಂಡ್ಯ ಬಂದ್ ಕರೆ ನೀಡಲಾಗಿದೆ. ಅಂದು ಮಂಡ್ಯ ನಗರವನ್ನ ಸಂಪೂರ್ಣ ಬಂದ್ ಮಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸಾಂಪ್ರದಾಯಿಕವಾಗಿ ಪ್ರತಿಭಟನೆ ನಡೆಸಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments