ಕೋಲಾರ : ಗಣೇಶ ಹಬ್ಬಕ್ಕೆ ಕೋಲಾರ ಜಿಲ್ಲೆಯಲ್ಲಿ ಭರ್ಜರಿ ಸಿದ್ದತೆ ನಡೆದಿದೆ. ವರ್ಷಕ್ಕೊಮ್ಮೆ ಬರುವ ಈ ಹಬ್ಬದ ಆಚರಣೆಗೆ ಕೊರೋನಾ ನಡುವೆಯೂ ಜನತೆ ಉತ್ಸುಕತೆ ತೋರಿದ್ದಾರೆ.
ಕೋಲಾರ ಜಿಲ್ಲೆಯಲ್ಲಿ ಗೌರಿ ಹಬ್ಬಕ್ಕಿಂತ ವಿನಾಯಕ ಚೌತಿಯ ಆಚರಣೆಗೆ ಹೆಚ್ಚಿನ ತಯಾರಿ ನಡೆದಿದೆ. ಜಿಲ್ಲೆಯ ಮಾರುಕಟ್ಟೆಗಳಲ್ಲಿ ಹೂವು-ಹಣ್ಣುಗಳ ಬೆಲೆ ಏರಿಕೆಯಾಗಿದ್ರೂ ಖರೀದಿಗೆ ಮುಗಿಬಿದ್ದಿರುವ ಜನರ ಸಂಖ್ಯೆ ಮಾತ್ರ ಕಡಿಮೆಯಾಗಿಲ್ಲ. ಕೋಲಾರ ನಗರದ ಹಳೆ ಬಸ್ ನಿಲ್ದಾಣ, ಮಹಾತ್ಮಗಾಂಧಿ ರಸ್ತೆ, ದೊಡ್ಡಪೇಟೆ ಏರಿಯಾಗಳ ಮಾರುಕಟ್ಟೆಗಳಲ್ಲಿ ಜನರು ತುಂಬಿ-ತುಳುಕುತ್ತಿದ್ದಾರೆ.
ಕೊರೋನಾ ವೈರಸ್ ಬಗ್ಗೆ ಮೊದಲಿದ್ದಷ್ಟು ಆತಂಕ ಇಲ್ಲ ಅನ್ನೋದಿಕ್ಕೆ ಮಾರ್ಕೆಟ್ ಪ್ರದೇಶದಲ್ಲಿದ್ದ ಜನಜಂಗುಳಿಯೇ ಸಾಕ್ಷಿಯಾಗಿದೆ.
ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿರುವ ಬಗ್ಗೆ ಬಹುತೇಕರು ತಲೆ ಕೆಡಿಸಿಕೊಂಡಿಲ್ಲ ಅನ್ನೋದಕ್ಕೆ ಇಂದು ಮಾರ್ಕೆಟ್ನಲ್ಲಿದ್ದ ಜನಸಾಗರವೇ ಸಾಕ್ಷಿಯಾಗಿತ್ತು. ಕ್ರಮ ಜರುಗಿಸಬೇಕಾದ ಸ್ಥಳೀಯ ಸಂಸ್ಥೆಗಳು, ಪೊಲೀಸ್ರು ನಿರ್ಲಕ್ಷ್ಯ ವಹಿಸಿದ್ದು, ಜನ್ರು ಖರೀದಿಯಲ್ಲಿ ಮಗ್ನರಾಗಿದ್ದಾರೆ.
-ಆರ್.ಶ್ರೀನಿವಾಸಮೂರ್ತಿ