Monday, September 15, 2025
HomeUncategorizedಕಾಂಗ್ರೆಸ್ ವಾರಸುದಾರರಿಲ್ಲದೆ ಮನೆಯಾಗಿದೆ: ಗೋವಿಂದ ಕಾರಜೋಳ

ಕಾಂಗ್ರೆಸ್ ವಾರಸುದಾರರಿಲ್ಲದೆ ಮನೆಯಾಗಿದೆ: ಗೋವಿಂದ ಕಾರಜೋಳ

ಗದಗ: ದೇಶದಲ್ಲಿ ಕಾಂಗ್ರೆಸ್ ಪರಿಸ್ಥಿತಿ ವಾರಸುದಾರರಿಲ್ಲದ ಮನೆಯಂತಾಗಿದೆ ಎಂದು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.

ನಗರದಲ್ಲಿ ಆಯೋಜಿಸಿರುವ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಅವಸಾನದ ಅಂಚಿಗೆ ತಲುಪಿದೆ. ಕಾಂಗ್ರೆಸ್ ವಾರಸುದಾರರಿಲ್ಲದ ಮನೆಯಂತಾಗಿದೆ. ಕಾಂಗ್ರೆಸ್ ಲೀಡರ್ ಲೆಸ್ ಪಾರ್ಟಿಯಾಗಿದೆ ಎಂದರು.

ಮುಖ್ಯಮಂತ್ರಿ ಗಾದಿಗಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ದಿನಾಲೂ ಕನಸು ಕಾಣುತ್ತಿದ್ದಾರೆ. ದೇಶದಲ್ಲಿ ರಾಹುಲ್ ಗಾಂಧಿ ನೂರಕ್ಕೆ ನೂರು ಪ್ರಧಾನ ಮಂತ್ರಿ  ಆಗಲ್ಲ. ರಾಜ್ಯದಲ್ಲಿಯೂ ಇನ್ನು ಕಾಂಗ್ರೆಸ್ ನಿಂದ ಯಾರೇ ಆಗಲಿ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ ಎಂದು ವ್ಯಂಗ್ಯವಾಡಿದರು.

ಮಹಲಿಂಗೇಶ್ ಹಿರೇಮಠ. ಗದಗ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments