Friday, September 12, 2025
HomeUncategorizedಹುಲಿಗಿಟ್ಟಿದ್ದ ಬೋನಲ್ಲಿ ಚಿರತೆ ಸೆರೆ

ಹುಲಿಗಿಟ್ಟಿದ್ದ ಬೋನಲ್ಲಿ ಚಿರತೆ ಸೆರೆ

ಚಾಮರಾಜನಗರ : ಹುಲಿ ಸೆರೆಗೆ ಇಟ್ಟಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಅರಕಲವಾಡಿ ಗ್ರಾಮದಲ್ಲಿ ನಡೆದಿದ್ದು ವ್ಯಾಘ್ರ ಭೀತಿಯಂತೂ ಇನ್ನು ಮುಂದುವರೆದಿದೆ.

ಚಾಮರಾಜನಗರ ಜಿಲ್ಲೆ ಅರಕಲವಾಡಿ ಗ್ರಾಮದ ಉದಯ್ ಎಂಬುವರ ಜಮೀನಿನಲ್ಲಿ ಹುಲಿ ಸೆರೆಗಾಗಿ ಕಳೆದ 15 ದಿನಗಳಿಂದ ಇಡುತ್ತಿದ್ದ ಬೋನಿಗೆ‌ ಗಂಡು ಚಿರತೆಯೊಂದು ಬಿದ್ದಿದೆ. ಅರಕಲವಾಡಿ ಸುತ್ತಮುತ್ತಲಿನ ಮೇಲೂರು, ಚೌಡಹಳ್ಳಿ ಎಲ್ಲೆ ಭಾಗದಲ್ಲಿ ಹುಲಿ ಓಡಾಡುತ್ತಿದ್ದು ಕೃಷಿ ಚಟುವಟಿಕೆ ನಡೆಸಲು ತೀವ್ರ ಭಯವಾಗುತ್ತಿದೆ ಎಂದು ರೈತರು ಕಳೆದ 6 ತಿಂಗಳಿನಿಂದ ಅಳಲು ತೋಡಿಕೊಂಡು ಬರುತ್ತಿದ್ದಾರೆ.

ಗ್ರಾಮದ ಸುತ್ತಮುತ್ತಲೂ ಹತ್ತಾರು ಚಿರತೆಗಳಿವೆ, ಚಿರತೆಗಳನ್ನು ಸೆರೆ ಹಿಡಿಯಿರಿ ಎಂದು ನಾವು ಹೇಳುತ್ತಿಲ್ಲ, ವಾರಕ್ಕೊಮ್ಮೆ-15 ದಿನಕ್ಕೊಮ್ಮೆ ಕಾಣುತ್ತಿರುವ ಹುಲಿಯಿಂದ ಕೃಷಿ ಚಟುವಟಿಕೆಗೆ ತೊಡಕಾಗಿದೆ, ಹಗಲಿನಲ್ಲೂ ಕೆಲಸ ನಿರ್ವಹಿಸಲು ಕಷ್ಟವಾಗುತ್ತಿದೆ, ಹುಲಿ ಓಡಾಡುತ್ತಿರುವುದು ಅರಣ್ಯ ಇಲಾಖೆಗೂ ತಿಳಿದಿದ್ದು ಡ್ರೋಣ್ ಸರ್ವೇ ಮಾಡಿಸಿ ಹುಲಿಯನ್ನು ಕಾಡಿಗಟ್ಟಬೇಕಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದರು.

ಇನ್ನು, ಸೆರೆಸಿಕ್ಕ ಚಿರತೆಯನ್ನು ಅರಣ್ಯಕ್ಕೆ ಬಿಡಲಾಗಿದ್ದು ಈ ಭಾಗದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಸೆರೆಸಿಕ್ಕ ಮೂರನೇ ಚಿರತೆ ಇದಾಗಿದೆ. ಆದರೆ, ಗ್ರಾಮಸ್ಥರಲ್ಲಿ ಮಾತ್ರ ಹುಲಿ ಆತಂಕ ಇನ್ನೂ ದೂರವಾಗಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments