Tuesday, September 2, 2025
HomeUncategorizedದತ್ತಪೀಠದಲ್ಲಿ ಮಾಂಸಾಹಾರ ಸೇವನೆ..!

ದತ್ತಪೀಠದಲ್ಲಿ ಮಾಂಸಾಹಾರ ಸೇವನೆ..!

ಚಿಕ್ಕಮಗಳೂರು :  ಐತಿಹಾಸಿಕ ದತ್ತಪೀಠದ ಆವರಣದಲ್ಲಿರುವ ಹೋಮ ಮಂಟಪದಲ್ಲಿಯೇ ಮತ್ತೆ ಮಾಂಸಹಾರದ ಊಟ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಭಾವೈಕ್ಯತೆ ಕೇಂದ್ರದಲ್ಲಿ ಹೀಗೆ ಮತ್ತೆ ಹಿಂದೂಗಳ ಭಾವನೆಗಳಿಗೆ ಧಕ್ಕೆ ಮಾಡಿರುವುದರಿಂದ ಹಿಂದೂ ಸಂಘಟನೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವೇ ಕ್ರಮಕೈಗೊಳ್ತೀವಿ ಎಂದು ಹಿಂದೂ ಬ್ರಿಗೇಡ್ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯದಿಂದ ಹೋಮ ಮಂಟಪದಲ್ಲಿ ಮಾಂಸಾಹಾರ ಸೇವನೆಯಾಗಿದೆ. ಪೀಠದ ಆವರಣದ ಪಕ್ಕದಲ್ಲೇ ಹೋಮಕ್ಕೆಂದು ನಿರ್ಮಿಸಿರುವ ತಾತ್ಕಾಲಿಕ ಶೆಡ್​ನಲ್ಲಿ ಮಾಂಸಾಹಾರ ಮಾಡಲಾಗಿದೆ. ಆರು ತಿಂಗಳ ಹಿಂದೆಯೂ ಇದೇ ಮಂಟಪದಲ್ಲಿ ಬಿರಿಯಾನಿ ಮಾಡಿದ್ದರು. ಆದರೆ ಕ್ರಮಕೈಗೊಳ್ಳುತ್ತೇವೆಂದು ಹೇಳಿ ಜಿಲ್ಲಾಡಳಿತ ಸುಮ್ಮನಾಗಿದೆ. ಜಿಲ್ಲಾಡಳಿತದ ದಿವ್ಯ ನಿರ್ಲಕ್ಷ್ಯದಿಂದ ಹೋಮ ಮಂಟಪದಲ್ಲಿ ಮಾಂಸಾಹಾರ ಸೇವನೆ ಮಾಡಲಾಗಿದೆ. ಜಿಲ್ಲಾಡಳಿತ ಸರಿಯಾದ ಕ್ರಮಕೈಗೊಂಡಿಲ್ಲ ಎಂದು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular

Recent Comments