Saturday, August 23, 2025
Google search engine
HomeUncategorizedಗಿಳಿ ಶಾಸ್ತ್ರ ಕೇಳಿದ ಸಿ.ಟಿ ರವಿ

ಗಿಳಿ ಶಾಸ್ತ್ರ ಕೇಳಿದ ಸಿ.ಟಿ ರವಿ

ಹಾಸನ : ಹಾಸನಾಂಬೆಯ ದರ್ಶನ ಮುಗಿಸಿ ವಾಪಸ್ಸು ಹೋಗುವಾಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಗಿಳಿ ಶಾಸ್ತ್ರ ಕೇಳಿದ್ದಾರೆ.

ಹಾಸನಾಂಬೆಯ ದೇವಾಲಯ ಬಳಿ ಗಿಳಿ ಶಾಸ್ತ್ರ ಕೇಳಿದ ರವಿ, ಇಂದು ಹಾಸನಾಂಬೆಯ ದರ್ಶನಕ್ಕೆ ಆಗಮಿಸಿದ್ದರು. ರಸ್ತೆಯ ಪಕ್ಕದಲ್ಲಿ ಕುಳಿತಿದ್ದ ವ್ಯಕ್ತಿಯ ಬಳಿ ಕಾರಿನಿಂದ ಇಳಿದು ಬಂದು ಶಾಸ್ತ್ರ ಕೇಳಿದ ಸಿ.ಟಿ.‌ರವಿ, ಮೊದಲಿಗೆ ಶಾಸ್ತ್ರ ಹೇಳುವವನ ಹೆಸರು, ಊರು, ಎಷ್ಟು ವರ್ಷದಿಂದ ಈ ವೃತ್ತಿಯನ್ನು ಮಾಡುತ್ತಿದ್ದೀರಾ ಎಂದು ವಿಚಾರಿಸಿದರು.

ಇನ್ನು, ನಿಮ್ಮ ಕೈ ರೇಖೆ ಚೆನ್ನಾಗಿದೆ, ಎಲ್ಲೇ ಹೋದರೂ ಅನ್ನ ಸಿಗುತ್ತದೆ, ಬಟ್ಟೆ ಅನ್ನಕ್ಕೆ ನಿಮಗೆ ತೊಂದರೆಯಿಲ್ಲ, ನಿಮಗೆ ಎಲ್ಲವೂ ಒಳ್ಳೆಯದಾಗುತ್ತದೆ ಎಂದು ಶಾಸ್ತ್ರ ಹೇಳಿದ ವ್ಯಕ್ತಿ, ನಿಮ್ಮ ಆರೋಗ್ಯ ಹಾಗೂ ನೀವು ಮಾಡುವ ಕೆಲದ ಬಗ್ಗೆ ಹೆಚ್ಚು ಜಾಗ್ರತೆ ವಹಿಸಿ, ದಾನಧರ್ಮ ಮಾಡೋದ್ರಲ್ಲಿ ಉದಾರತೆ ಬೇಡ, ತಿಥಿ ಊಟ ಮಾಡೋದಕ್ಕೆ ಹೋಗಬೇಡಿ ಎಂದು ಹೇಳಿದ್ದಾನೆ.

RELATED ARTICLES
- Advertisment -
Google search engine

Most Popular

Recent Comments