ಬೆಳಗಾವಿ : ಅನಾರೋಗ್ಯದಿಂದ ಬೆಳಗಾವಿಯ ಯೋಧ ಮಂಜುನಾಥ್ ಮುಸಲ್ಮಾರಿ ವಿಧಿವಶರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಾವನೂರು ಗ್ರಾಮದವರಾದ ಮಂಜುನಾಥ್ ಮುಸಲ್ಮಾರಿ ಉತ್ತರ ಪ್ರದೇಶದ ಮೀರತ್ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಆರ್.ಆರ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಸ್ವಗ್ರಾಮ ಮಾವನೂರಿನಲ್ಲಿ ಇಂದು ಅವರ ಅಂತ್ಯಕ್ರಿಯೆ ನೆರವೇರಲಿದೆ.