ಕೋಲ್ಕತ್ತಾ : ಮಹಾಮಾರಿ ಕೊರೋನಾಗೆ ಪಶ್ಚಿಮ ಬಂಗಾಳದಲ್ಲಿಸೋಮವಾರ ಐಎಎಸ್ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಹೂಗ್ಲಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೇಬದತ್ತ ರೇ (33) ಕೊರೋನಾದಿಂದ ಮೃತಪಟ್ಟ ಅಧಿಕಾರಿ.
ಕೊರೋನಾ ಪಾಸಿಟಿವ್ ಬಂದಿದ್ದರಿಂದ ಅವರು ಹೋಂ ಕ್ವಾರಂಟೈನ್ನಲ್ಲಿದ್ದರು. ಭಾನುವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸಲಿಲ್ಲ.
ದೇಬದತ್ತ ರೇಯವರು 2010ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದು, ಪಶ್ಚಿಮ ಬಂಗಾಳ ಮತ್ತು ವಿವಿಧ ರಾಜ್ಯಗಳಿಂದ ಶ್ರಮಿಕ್ ಎಕ್ಸ್ ಪ್ರೆಸ್ ರೈಲಿನಲ್ಲಿ ಡಂಕಣಿಗೆ ಆಗಮಿಸಿದ ವಲಸೆ ಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಹೀಗೆ ಕೊರೋನಾ ವಾರಿಯರ್ ಆಗಿ ಕೆಲಸ ಮಾಡುತ್ತಿದ್ದಾಗ ಸೋಂಕು ತಗುಲಿತ್ತು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
Grieved to hear about the untimely passing away of Debdatta Ray, who was posted as Deputy Magistrate & Deputy Collector in Chandannagar. A young WBCS (Exe) Officer, she was at the forefront fighting the pandemic & displayed outstanding devotion in discharge of her duties. (1/2)
— Mamata Banerjee (@MamataOfficial) July 13, 2020
https://twitter.com/HowrahMunicipal/status/1282585106809384960/photo/1