ಚಿಕ್ಕಮಗಳೂರು : ನಿಷೇಧದ ಮಧ್ಯೆಯೂ ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸೋ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿನಲ್ಲಿ ಪ್ರವಾಸಿಗರ ಸೆಲ್ಫಿ ಕ್ರೇಜ್ ಮುಂದುವರೆದಿದೆ. ಕಳೆದೆರಡು ವರ್ಷಗಳಲ್ಲಿ ಚಾರ್ಮಾಡಿ ಮಾರ್ಗದಲ್ಲಿ ಸೆಲ್ಫಿ ಕ್ರೇಜಿಗೆ ಸಾವು-ನೋವು ಕೂಡ ಸಂಭವಿಸಿವೆ. ಕಳೆದ ವರ್ಷ ಕೂಡ ಪ್ರವಾಸಿಗನೋರ್ವ ಬಂಡೆ ಮೇಲಿಂದ ಜಾರಿ ಬಿದ್ದು ಕೈ ಮುರಿದುಕೊಂಡಿದ್ದ. ಈಗ ಈ ಮಾರ್ಗವಾಗಿ ಸಂಚರಿಸೋ ಪ್ರವಾಸಿಗರು ಮತ್ತದೇ ತಪ್ಪುಗಳನ್ನ ಮಾಡ್ತಿದ್ದಾರೆ. ಜಿಲ್ಲೆಯಲ್ಲಿ ಮುಂಗಾರು ಆರಂಭಗೊಂಡಿದ್ದು, ಚಾರ್ಮಾಡಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. 22 ಕಿ.ಮೀ. ಚಾರ್ಮಾಡಿಯ ಮಧ್ಯೆ ಅಲ್ಲಲ್ಲೇ ಸಣ್ಣ ಜಲಪಾತಗಳು ಸೃಷ್ಠಿಯಾಗಿವೆ. ಪ್ರವಾಸಿಗರು ಎಲ್ಲೆಂದರಲ್ಲಿ ಗಾಡಿ ನಿಲ್ಲಿಸಿ ಬಂಡೆಗಳ ಮೇಲೆ ಹತ್ತಿ ಸೆಲ್ಫಿ, ಫೋಟೋ ಸೆಷೆನ್ ನಡೆಸುತ್ತಿದ್ದಾರೆ. ಅಷ್ಟೆ ಅಲ್ಲದೆ, ಈ ಮಾರ್ಗದಲ್ಲಿ ಎಲ್ಲೂ ಸೆಲ್ಫಿ ತೆಗೆಯಲು ಅವಕಾಶವಿಲ್ಲ. ಚಾರ್ಮಾಡಿಯಲ್ಲಿ ಸೆಲ್ಫಿಗೆ ಸರ್ಕಾರ ನಿಷೇಧಿಸಿದೆ. ಆದರೆ, ಪ್ರವಾಸಿಗರು ಅಪಾಯದ ಸ್ಥಳಗಲ್ಲಿ ಮತ್ತೇ ಬಂಡೆಗಳ ಮೇಲೆ ಹತ್ತಿ ಸೆಲ್ಫಿಗೆ ಮುಗಿ ಬೀಳ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ….
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on