ಬೆಂಗಳೂರು: ಕಾಂಗ್ರೆಸ್ನ ನಾಲ್ವರು ಅತೃಪ್ತರ ವಿರುದ್ಧ ಸಿಎಲ್ಪಿ ನಾಯಕ ಸಿದ್ದರಾಮಯ್ಯ ಸ್ಪೀಕರ್ ರಮೇಶ್ ಕುಮಾರ್ಗೆ ದೂರು ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಅವರು ರಮೇಶ್ ಜಾರಕಿಹೊಳಿ, ನಾಗೇಂದ್ರ, ಮಹೇಶ್ ಕುಮಟಳ್ಳಿ, ಉಮೇಶ್ ಜಾಧವ್ ವಿರುದ್ಧ 82 ಪುಟಗಳ ಸುದೀರ್ಘ ದೂರನ್ನು ನೀಡಿದ್ದಾರೆ. ಈ ನಾಲ್ಕು ಮಂದಿಯನ್ನು ಅನರ್ಹಗೊಳಿಸುವಂತೆ ಮುಖಂಡರು ಮನವಿ ಸಲ್ಲಿಸಿದ್ದಾರೆ. ನಾಲ್ವರಿಗೂ ಕೊಟ್ಟಿದ್ದ 3 ನೋಟಿಸ್, ವಿಪ್, ಸಚೇತನಾ ಪತ್ರ ಸಲ್ಲಿಸಿದ್ದಾರೆ. ಇನ್ನು ಶಾಸಕರಿಗೆ ಎಚ್ಚರಿಕೆಯ ದಾಖಲೆಗಳು ದೂರು ಪ್ರತಿ ಜತೆ ಸಲ್ಲಿಕೆ ಮಾಡಲಾಗಿದೆ. ಸಿದ್ದರಾಮಯ್ಯ ಅವ್ರಿಗೆ ಡಿಸಿಎಂ ಡಾ. ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್ ಸಾಥ್ ನೀಡಿದ್ದಾರೆ.