ಮಂಗಳೂರು : ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿರುವ ಲಕ್ಷ್ಮೀ ಹೆಸರಿನ ಆನೆಯು ಹೆಣ್ಣು ಮರಿಗೆ ಜನ್ಮ ನೀಡಿದೆ. 20 ತಿಂಗಳ ಗರ್ಭಾವಸ್ಥೆ ಬಳಿಕ ಮುದ್ದಾದ ಹೆಣ್ಣಾನೆಗೆ ಲಕ್ಷ್ಮೀಯು ಜನ್ಮ ನೀಡಿದ್ದಾಳೆ. ಮರಿ ಆನೆ ಹಾಗೂ ತಾಯಿ ಆನೆ ಎರಡೂ ಆರೋಗ್ಯವಂತವಾಗಿದ್ದು, ಸೂಕ್ತ ಸಮಯಕ್ಕೆ ಅದಕ್ಕೆ ಬೇಕಾದ ಆಹಾರ ಹಾಗೂ ಚಿಕಿತ್ಸೆಗಳನ್ನ ಒದಗಿಸಲಾಗುತ್ತಿದೆ. ಧರ್ಮಸ್ಥಳ ಪಶು ವೈದ್ಯಾಧಿಕಾರಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ನಿಗಾದಲ್ಲಿ ಲಕ್ಷ್ಮೀಗೆ ಸುಸೂತ್ರವಾಗಿ ಹೆರಿಗೆ ಆಗಿದೆ. ಲಕ್ಷ್ಮೀಯನ್ನ ಎರಡು ವರುಷದ ಹಿಂದೆ ಆನೆಗಳ ಸಂತಾನೋತ್ಪತ್ತಿ ಉದ್ದೇಶದಿಂದ ಬನ್ನೇರುಘಟ್ಟಕ್ಕೆ ಕಳುಹಿಸಿ ಕೊಡಲಾಗಿತ್ತು. ಇದೀಗ ಲಕ್ಷ್ಮೀ, ಹೆಣ್ಣು ಮರಿಗೆ ಜನ್ಮ ನೀಡಿದ್ದು ಐತಿಹಾಸಿಕ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿ ಆಗಮಿಸಿದಂತಾಗಿದೆ.
ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಹೊಸ ಅತಿಥಿಯ ಆಗಮನ..!
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


