ಡ್ರೋನ್ ತಯಾರಿಸಿ ಅಂತರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದೇನೆ ಎಂದು ಹೇಳಿ ಅಪಹಾಸ್ಯಕ್ಕೀಡಾಗುತ್ತಿರುವ ಡ್ರೋನ್ ಪ್ರತಾಪ್ ವಿರುದ್ಧ ಇದೀಗ ಶಿವಮೊಗ್ಗದ ವಕೀಲರೊಬ್ಬರು ದೂರು ನೀಡಿದ್ದಾರೆ. ಮಂಡ್ಯದ ಡ್ರೋನ್ ಪ್ರತಾಪ್ ಎಂದೇ ಹೆಸರುವಾಸಿಯಾಗಿದ್ದ ಈ ಯುವಕನಿಗೆ ಕೊರೋನಾ ಕಾಟಕ್ಕಿಂತಲೂ ಕಾಗೆ ಹಾರಿಸಿದ್ದೆ ಹೆಚ್ಚು ಕಾಟವಾಗಿ ಪರಿಣಮಿಸಿದೆ. ಅಂದಹಾಗೆ, ಶಿವಮೊಗ್ಗದ ಸಾಗರದ ಕೆ.ವಿ. ಪ್ರವೀಣ್ ಎಂಬ ವಕೀಲರು, ರಿಜಿಸ್ಟರ್ ಪೋಸ್ಟ್ ಮೂಲಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮತ್ತು ಮಂಡ್ಯ ಎಸ್.ಪಿ.ಗೆ ದೂರು ಸಲ್ಲಿಸಿ, ಪ್ರತಾಪ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಪತ್ರ ರವಾನಿಸಿದ್ದಾರೆ. ಡ್ರೋನ್ ತಯಾರಿಸಿದ್ದಾಗಿ ರೈಲು ಬಿಟ್ಟ ಪ್ರತಾಪ್ ಎಂಬ ಪತ್ರಿಕಾ ವರದಿಯನ್ನು ಆಧರಿಸಿ ದೂರು ದಾಖಲು ಮಾಡಿರುವ ವಕೀಲ ಕೆ.ವಿ. ಪ್ರವೀಣ್ ಅವರು, ಸಂಶೋಧನೆ ಹೆಸರಿನಲ್ಲಿ, ಸಾರ್ವಜನಿಕರಿಂದ ಅಪಾರ ದೇಣಿಗೆ ಪಡೆದು ಪ್ರತಾಪ್ ಐಶಾರಾಮಿ ಜೀವನ ನಡೆಸಿರುವ ಬಗ್ಗೆ ವರದಿ ಬಗ್ಗೆ ಉಲ್ಲೇಖಿಸಿದ್ದಾರೆ. ಅಲ್ಲದೇ, 87 ರಾಷ್ಟ್ರಗಳಲ್ಲಿ ಆಫರ್ ದೊರೆತಿರುವುದಾಗಿ ಹೇಳಿಕೊಳ್ಳುವ ಮೂಲಕ ದೇಶವಾಸಿಗಳ ನಂಬಿಕೆಗೆ ದ್ರೋಣ್ ಪ್ರತಾಪ್ ಮೋಸ ಮಾಡಿದ್ದಾರೆ. ಜೊತೆಗೆ, ಸಾರ್ವಜನಿಕವಾಗಿ ದೇಣಿಗೆ, ಬಿರುದು, ಸನ್ಮಾನಗಳನ್ನು ಪಡೆದು ದ್ರೋಣ್ ಪ್ರತಾಪ್ ವಂಚಿಸಿದ್ದಾರೆ. ಹೀಗಾಗಿ, ಇವರ ವಿರುದ್ಧ, ಸೂಕ್ತ ಕಾನೂನು ಕ್ಷೇತ್ರ ವ್ಯಾಪ್ತಿಯಲ್ಲಿ ಕಾನೂನು ಕ್ರಮ ಜರುಗಿಸಲು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಹಿಂದೆ ಈ ಸಾಗರದ ವಕೀಲರಾದ ಕೆ.ವಿ. ಪ್ರವೀಣ್ ಅವರು, ಕಾಂಗ್ರೆಸ್ ನ ಅಧಿನಾಯಕಿ ಸೋನಿಯಾಗಾಂಧಿ ವಿರುದ್ಧವೂ ಸಾಗರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರು.
ಡ್ರೋನ್ ಪ್ರತಾಪ್ ವಿರುದ್ಧ ಶಿವಮೊಗ್ಗದ ವಕೀಲ ಪ್ರವೀಣ್ ರಿಂದ ದೂರು ದಾಖಲು…!!
RELATED ARTICLES
Recent Comments
on ಕ್ಷಮಿಸಿ ಪಾಕ್ ಅಭಿಮಾನಿಗಳೇ, 10 ನಿಮಿಷದಲ್ಲಿ ಟಿವಿ ಡೆಲಿವರಿ ಮಾಡೋಕೇ ಆಗಲ್ಲ: ಪಾಕ್ನ ಟ್ರೋಲ್ ಮಾಡಿದ ಬ್ಲಿಂಕ್ಇಟ್
on ಗ್ರಾಮಿಣ ಬಾಗದ ಕಾಲೇಜನ್ನು ಬೆಳಗಾವಿಗೆ ಸ್ಥಳಾಂತರ ವಿರುದ್ದ ಸತ್ಯಾಗ್ರಹ ಮಾಡುತ್ತೆನೆ ಅದಕ್ಕಾಗಿ ಜೈಲಿಗೆ ಹೋಗಲು ಸಿದ್ದ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


