ಬೆಳಗಾವಿ : ಮಂಗಳೂರು ಬಾಂಬ್ ಪತ್ತೆ ಪ್ರಕರಣದ ಆರೋಪಿ ಆದಿತ್ಯರಾವ್ ಮಾನಸಿಕ ಅಸ್ವಸ್ಥ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆತ ಕೆಲಸ ಸಿಕ್ಕಿಲ್ಲವೆಂಬ ಕಾರಣಕ್ಕೆ ಮಾನಸಿಕವಾಗಿ ನೊಂದಿದ್ದನು. ಅಲ್ಲದೆ ಆತ ಬೆಂಗಳೂರು ಏರ್ಪೋರ್ಟ್ನಲ್ಲಿ ಬಾಂಬ್ ಇಡುವುದಾಗಿ ಬೆದರಿಸಿ ಹುಸಿ ಬಾಂಬ್ ಕರೆ ಮಾಡಿ ಶಿಕ್ಷೆಯು ಅನುಭವಿಸಿದ್ದಾನೆ. ಅಷ್ಟೇ ಅಲ್ಲ ಈಗಾಗಲೇ ಎರಡು ಬಾರಿ ಆತನ ಮೇಲೆ ಕಂಪ್ಲೆಂಟ್ ದಾಖಲಾಗಿತ್ತು. ಆದ್ದರಿಂದ ಆತನ ಬಗ್ಗೆ ಅನುಮಾನ ಬಂದಿದ್ದ ಕಾರಣ ವಿಚಾರಣೆ ಆರಂಭಿಸಿ ಸಂಬಂಧಿಕರನ್ನು ವಿಚಾರಿಸಲಾಗಿದೆ. ಈ ವಿಷಯ ಆದಿತ್ಯನಿಗೆ ಗೊತ್ತಾಗಿ ಬೇರೆ ದಾರಿಯಿಲ್ಲದೆ ಡಿಜಿಪಿ ಆಫೀಸಿಗೆ ಬಂದು ಶರಣಾಗಿದ್ದಾನೆ ಎಂದರು.
ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ನವರು ಅಲ್ಪಸಂಖ್ಯಾತರ ಓಲೈಕೆಗೆ ಪೈಪೋಟಿ ನಡೆಸುತ್ತಿದ್ದಾರೆ. ಆದ್ದರಿಂದ ನಿಮ್ಮ ರಾಜಕೀಯ ಲಾಭಕ್ಕಾಗಿ ದೇಶದ್ರೋಹಿ ಕೃತ್ಯಗಳನ್ನು ಮಾಡುವವರಿಗೆ ಪ್ರಚೋದನೆ ಕೊಡದೆ ಕುಮಾರಸ್ವಾಮಿ ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಟೀಕಾ ಪ್ರಹಾರ ನಡೆಸಿದರು.