ಸದ್ಯ ರಾಷ್ಟ್ರ ರಾಜಕಾರಣಲ್ಲಿ ‘ಮಹಾ’ ಪಾಲಿಟ್ರಿಕ್ಸ್ನದ್ದೇ ಸದ್ದು. ಮಹಾರಾಷ್ಟ್ರ ಸರ್ಕಾರ ರಚನೆ ಬಿಕ್ಕಟ್ಟಿನ ಕುರಿತ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್ ನಾಳೆಗೆ ತೀರ್ಪನ್ನುಕಾಯ್ದಿರಿಸಿದೆ.
ಬಿಜೆಪಿ ಮತ್ತು ಎನ್ಸಿಪಿ ಅಜಿತ್ ಪವಾರ್ಗೆ ಸರ್ಕಾರ ರಚಿಸಲು ಆಹ್ವಾನಿಸಿದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಶಿವಸೇನೆ, ಎನ್ಸಿಪಿ ಮತ್ತು ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ಕೂಡ ಮುಂದುವರೆಸಿತು. ವಿಚಾರಣೆ ನಡೆಸಿದ ನ್ಯಾ. ಎನ್ ವಿ ರಮಣ, ನ್ಯಾ. ಅಶೋಕ್ ಭೂಷಣ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ನಾಳೆ ಬೆಳಗ್ಗೆ 10.30ಕ್ಕೆ ತೀರ್ಪು ಕಾಯ್ದಿರಿಸಿತು.
ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಸಿಎಂ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ವೇಳೆಯಲ್ಲಿ ಸಲ್ಲಿಸಿದ್ದ ಪತ್ರ ಮತ್ತು ರಾಜ್ಯಪಾಲರ ಪತ್ರವನ್ನು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟಿಗೆ ಸಲ್ಲಿಸಿ, ವಾದ ಮಂಡಿಸಿದರು.
ಭಾನುವಾರ ತುರ್ತು ವಿಚಾರಣೆ ನಡೆಸಿದ್ದ ತ್ರಿಸದಸ್ಯ ಪೀಠ, ಸರಕಾರ ರಚನೆಗೆ ಆಹ್ವಾನಿಸಿ ರಾಜ್ಯಪಾಲರು ನೀಡಿದ ಪತ್ರ ಹಾಗೂ ಫಡ್ನಿವಿಸ್ ರಾಜ್ಯಪಾಲರಿಗೆ ನೀಡಿದ ಬೆಂಬಲ ಪತ್ರವನ್ನು ಸಲ್ಲಿಸುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಸೂಚಿಸಿತ್ತು.
ಇನ್ನು ಸರ್ಕಾರದ ಪರ (ಬಿಜೆಪಿ) ಮುಕುಲ್ ರೊಹ್ಟಗಿ, ಶಿವಸೇನಾ ಪರ ಕಪಿಲ್ ಸಿಬಲ್, ಎನ್ಸಿಪಿ -ಕಾಂಗ್ರೆಸ್ ಪರ ಮನುಸಿಂಘ್ವಿ ವಾದ ಮಂಡಿಸಿದ್ರು. ವಾದ – ಪ್ರತಿವಾದ ಆಲಿಸಿದ ಕೋರ್ಟ್ ನಾಳೆ ‘ಮಹಾ’ ಭವಿಷ್ಯ ತಿಳಿಸಲಿದೆ.
ನಾಳೆಗೆ ‘ಮಹಾ’ ಭವಿಷ್ಯ ಕಾಯ್ದಿರಿಸಿದ ಸುಪ್ರೀಂಕೋರ್ಟ್
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


