ಇಸ್ಲಮಾಬಾದ್: ಅಭಿನಂದನ್ ನಮ್ಮ ರಕ್ಷಣೆಯಲ್ಲಿದ್ದಾರೆ. ಅವರ ಬಗ್ಗೆ ಯಾವುದೇ ಆತಂಕ ಬೇಡ ಅಂತ ಪಾಕ್ ಮಾಧ್ಯಮಕ್ಕೆ ವಿದೇಶಾಂಗ ಸಚಿವ ಸಲ್ಮಾನ್ ಖುರೇಷಿ ಹೇಳಿಕೆ ನೀಡಿದ್ದಾರೆ. ಹಾಗೆಯೇ ಮಾತುಕತೆ ನಂತರ ತೀರ್ಮಾನ ತೆಗೆದುಕೊಳ್ಳುತ್ತೇವೆ ಅನ್ನೋ ಮೂಲಕ ಮಾತುಕತೆ ನಡೆಸುವ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.
ಪಾಕಿಸ್ತಾನದ ವಶದಲ್ಲಿರುವ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಕುಟುಂಬಕ್ಕೆ ಪಾಕಿಸ್ತಾನ ಅಭಯ ನೀಡಿದ್ದು, ಅಭಿನಂದನ್ರನ್ನು ಸೂಕ್ತ ರೀತಿಯಲ್ಲಿ ನೋಡಿಕೊಳ್ಳಲಾಗುತ್ತಿದೆ. ಜಿನೇವಾ ಒಪ್ಪಂದದ ಪ್ರಕಾರವೇ ನಡೆದುಕೊಳ್ಳಲಾಗುತ್ತಿದೆ ಅಂತ ಹೇಳಿದ್ದಾರೆ.
ಅಭಿನಂದನ್ ಅವರನ್ನು ವಾಪಸ್ ಕಳಿಸುವ ಬಗ್ಗೆ ಯಾವುದೇ ಸ್ಪಷ್ಟ ಪ್ರಸ್ತಾಪವನ್ನು ಮಾಡಿಲ್ಲ. ಜಿನೇವಾ ಒಪ್ಪಂದದ ಪ್ರಕಾರ ನಡೆದುಕೊಳ್ತೀವಿ. ಮಾತುಕತೆ ನಂತರ ಈ ಕುರಿತು ನಿರ್ಧಾರ ತೆಗೆದುಕೊಳ್ತೀವಿ. ಪುಲ್ವಾಮಾ ದಾಳಿ ತಮಗೆ ಭಾರತ ನೀಡಿರುವ ಸಾಕ್ಷ್ಯಾಧಾರಗಳು ಸಿಕ್ಕಿವೆ. ಭಾರತದ ಸಾಕ್ಷ್ಯಾಧಾರಗಳನ್ನು ನೋಡಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಎಲ್ಲವನ್ನೂ ಕೂಲಂಕಶವಾಗಿ ವಿಶ್ಲೇಷಿಸಿ ಮುಂದಿನ ನಡೆಯ ಬಗ್ಗೆ ನಿರ್ಧರಿಸಲಾಗುತ್ತದೆ ಅಂತ ಖುರೇಷಿ ಹೇಳಿದ್ದಾರೆ.