ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಚಿದಾನಂದ ಮೂರ್ತಿ ವಿಧಿವಶರಾಗಿದ್ದು, ಅವರ ನಿಧನಕ್ಕೆ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಅನೇಕ ಗಣ್ಯರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಕನ್ನಡಕ್ಕೆ ಮಿಡಿಯುತ್ತಿದ್ದ ಲೇಖಕ, ಸಂಶೋಧಕ, ಚಿಂತಕ ಚಿಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ. ಆ ಸ್ಥಾನವನ್ನು ಯಾರೂ ತುಂಬಲು ಸಾಧ್ಯವಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, ಸಂಶೋಧಕ, ಚಿಂತಕ, ಇತಿಹಾಸಕಾರರಾಗಿದ್ದ ಚಿ.ಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ, ಯಾರೂ ತುಂಬಲಾಗದು. ಹಂಪಿಯ ಸ್ಮಾರಕಗಳನ್ನು ಉಳಿಸುವಲ್ಲಿ ಹಾಗೂ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗುವಲ್ಲಿ ಇವರ ಪ್ರಯತ್ನ ಸ್ಮರಣೀಯ. ಅವರಾತ್ಮಕ್ಕೆ ಶಾಂತಿ ದೊರಕಲಿ. #RIPChidanandaMurthi pic.twitter.com/PlNINCGeDI
— B.S. Yediyurappa (@BSYBJP) January 11, 2020
ಕನ್ನಡ ಗರುಡ ಡಾ.ಚಿದಾನಂದ ಮೂರ್ತಿ ಅವರ ನಿಧನದಿಂದ ನಾಡು ಅಪರೂಪದ ವಿದ್ವಾಂಸವನ್ನು ಕಳೆದುಕೊಂಡಿದೆ. ಚಿಮೂ ಎಂದೇ ಖ್ಯಾತರಾಗಿದ್ದಹಿರಿಯ ಜೀವ ನಾಡುನುಡಿಜಲಕ್ಕಾಗಿ ಶ್ರಮಿಸಿದವರು ಎಂದು ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ನಲ್ಲಿ ಬರೆದುಕೊಂಡಿದ್ದಾರೆ.
ಹಿರಿಯ ಸಂಶೋಧಕ,ಕನ್ನಡ ಗರುಡ ಡಾ. ಚಿದಾನಂದ ಮೂರ್ತಿ ಅವರ ನಿಧನದಿಂದ ನಾಡು ಅಪರೂಪದ ವಿದ್ವಾಂಸರನ್ನು ಕಳೆದುಕೊಂಡಿದೆ.ಕನ್ನಡ ಶಕ್ತಿ ಕೇಂದ್ರ ಸ್ಥಾಪಿಸಿದ್ದ 'ಚಿಮೂ'ಎಂದೇ ಖ್ಯಾತರಾಗಿದ್ದ ಹಿರಿಯ ಜೀವ ನಾಡುನುಡಿಜಲಕ್ಕಾಗಿ ಅಹರ್ನಿಶಿ ಶ್ರಮಿಸಿದ್ದರು.
ಮೃತರ ಕುಟುಂಬ ಸದಸ್ಯರಿಗೆ,ಅವರ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ pic.twitter.com/NMHadTXwwZ— H D Kumaraswamy (@hd_kumaraswamy) January 11, 2020
ಮಾಜಿ ಸಿಎಂ ಸಿದ್ದರಾಮಯ್ಯ ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ. ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದು:ಖವಾಯಿತು. ನಾಡು ಸದಾ ಅವರನ್ನು ಸ್ಮರಿಸುತ್ತದೆ ಎಂದು ಸಂತಾಪ ಸೂಚಿಸಿದ್ದಾರೆ.
ಹಿರಿಯ ಸಾಹಿತಿ,ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದು:ಖವಾಯಿತು.
ಅವರ ಸಂಶೋಧನೆ ಮತ್ತು ಸಾಹಿತ್ಯದ ಜೊತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ಮೀರಿದ ಸ್ನೇಹ ಶೀಲ ಗುಣವನ್ನೂ
ನಾಡು ಸದಾ ಸ್ಮರಿಸುತ್ತದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/VDFzUwiekx— Siddaramaiah (@siddaramaiah) January 11, 2020
ಚಿದಾನಂದ ಮೂರ್ತಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ ಸದಾನಂದ ಗೌಡ ಖ್ಯಾತ ಸಂಶೋಧಕ, ಸತ್ಯನಿಷ್ಠ ಹೋರಾಟಗಾರ, ವಚನ ಸಾಹಿತ್ಯ, ಭಾಷಾಶಾಸ್ತ್ರದ ವಿದ್ವಾಂಸರ ಅಗಲಿಕೆ ಕನ್ನಡ ಸಾರಸ್ವತ ಲೋಕದಲ್ಲಿ ಶೂನ್ಯವನ್ನು ಸೃಷ್ಟಿಸಿದೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ.
ಖ್ಯಾತ ಸಂಶೋಧಕ, ಇತಿಹಾಸಜ್ಞ, ಸತ್ಯನಿಷ್ಠ ಹೋರಾಟಗಾರ, ವಚನ ಸಾಹಿತ್ಯ, ಶಾಸನ, ಭಾಷಾಶಾಸ್ತ್ರದ ವಿದ್ವಾಂಸ ಡಾ. ಎಂ. ಚಿದಾನಂದ ಮೂರ್ತಿ ಅವರ ಅಗಲಿಕೆಯು ಕನ್ನಡ ಸಾರಸ್ವತ ಲೋಕದಲ್ಲಿ ಶೂನ್ಯವನ್ನು ಸೃಷ್ಟಿಸಿದೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ಉಂಟುಮಾಡಲಿ, ಅವರ ಕುಟುಂಬದವರಿಗೆ ಹಾಗೂ ಅಸಂಖ್ಯಾತ ಅನುಯಾಯಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ.
— Sadananda Gowda (@DVSadanandGowda) January 11, 2020
ಸಾಹಿತಿ ಚಿದಾನಂದ ಮೂರ್ತಿ ಅವರ ಅಗಲಿಕೆಗೆ ಸಚಿವ ಸುರೇಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಹಂಪೆಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನ ರೀತಿ ತನ್ನ ಜೀವನವನ್ನೇ ಮುಡುಪಾಗಿಟ್ಟ ಶ್ರೀ ಎಂ ಚಿದಾನಂದಮೂರ್ತಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಟ್ವೀಟ್ ಮಾಡಿದ್ದಾರೆ.
ನಾಡಿನ ಹಿರಿಯ ಸಾಹಿತಿ, ಇತಿಹಾಸಜ್ಞ, ಹೋರಾಟಗಾರ, ವಿಶೇಷವಾಗಿ ಹಂಪೆಯ ಜೊತೆ ಬಹಳ ಆಪ್ತತೆ ಬೆಳೆಸಿಕೊಂಡಿದ್ದ, ಕನ್ನಡ ನಾಡಿನ ನೆಲ-ಜಲ-ಭಾಷೆ-ಸಂಸ್ಕೃತಿಯ ಕಾವಲುಗಾರನ ರೀತಿ ತನ್ನ ಜೀವನವನ್ನೇ ಮುಡುಪಾಗಿಟ್ಟ ಶ್ರೀ ಎಂ ಚಿದಾನಂದಮೂರ್ತಿಗಳು ಇನ್ನಿಲ್ಲ ಎಂಬ ಸುದ್ದಿ ಕೇಳಿ ಆಘಾತವಾಗಿದೆ. ಅವರ ಆತ್ಮಕ್ಕೆ ಸದ್ಗತಿ ದೊರಕಲಿ. pic.twitter.com/D1rViTsAns
— S.Suresh Kumar, Minister – Govt of Karnataka (@nimmasuresh) January 11, 2020