ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ‘ಸಪ್ತ ಸಾಗರದಾಚೆ ಎಲ್ಲೋ’ ಹೊರಟಿದ್ದಾರೆ. 777 ಚಾರ್ಲಿ ಸಿನಿಮಾದಲ್ಲಿ ಬ್ಯುಸಿ ಇರೋ ಅವರು ಯಾವ್ ಕಡೆ ಟ್ರಿಪ್ ಹೊರಟ್ರು? ಅದೂ ಈ ಕೊರೋನಾ ಆತಂಕದ ನಡುವೆ ಅಂತ ಕೇಳ್ತಿದ್ದೀರಾ? ಅವ್ರು ಎಲ್ಲಿಗೂ ಸದ್ಯ ಹೊರಟಿಲ್ಲ… ‘ಸಪ್ತ ಸಾಗರದಾಚೆ ಎಲ್ಲೋ’ ಅನ್ನೋದು ಅವರ ಮುಂದಿನ ಸಿನಿಮಾ!
ಹೌದು ರಕ್ಷಿತ್ ಶೆಟ್ಟಿ ಅಭಿನಯದ ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು‘ ಸಿನಿಮಾದ ಮೂಲಕ ಸ್ಯಾಂಡಲ್ವುಡ್ಗೆ ಕಾಲಿಟ್ಟ ನಿರ್ದೇಶಕ ಹೇಮಂತ್ ರಾವ್ ಇನ್ನೊಂದು ಸಾಹಸಕ್ಕೆ ಕೈ ಹಾಕಿದ್ದಾರೆ. ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದೀಗ ಅದೇ ಟೀಮ್ ಮತ್ತೊಮ್ಮೆ ಜೊತೆಯಾಗಿ ಬರಲು ಸಿದ್ಧತೆ ಮಾಡಿಕೊಂಡಿದೆ.
` ಸಪ್ತ ಸಾಗರದಾಚೆ ಎಲ್ಲೋ’ ಎಂಬ ಸಿನಿಮಾವನ್ನು ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣ ಮಾಡಲಿದ್ದು, ರಕ್ಷಿತ್ ಶೆಟ್ಟಿ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಕ್ಕೆ ಹೇಮಂತ್ ರಾವ್ ನಿರ್ದೇಶಿಸಲಿದ್ದಾರೆ. ಈ ಮೂಲಕ ಮತ್ತೊಮ್ಮೆ ಮೂವರು ಒಟ್ಟಾಗಿ ಸಿನಿಮಾ ಮಾಡಲು ಹೊರಟಿದ್ದಾರೆ.
`ಸಪ್ತ ಸಾಗರದಾಚೆ ಎಲ್ಲೋ’ ವಿಭಿನ್ನ ಕಥೆಯನ್ನು ಒಳಗೊಂಡಿದ್ದು, ಇದೊಂದು ಲವ್ ಕಂ ಆ್ಯಕ್ಷನ್ ಸಿನಿಮಾವಾಗಿದೆ ಎಂದು ಚಿತ್ರತಂಡ ಹೇಳಿದೆ.