ಶಿವಮೊಗ್ಗ : ಇನ್ನು ಶಿವಮೊಗ್ಗದಲ್ಲಿ ಕೊರೋನಾ ಸೋಂಕಿತರು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಲಾಕ್ ಡೌನ್ ಮಾಡುವ ಬಗ್ಗೆ ಕೂಗು ಕೇಳಿ ಬರುತ್ತಿದೆ. ಸಾರ್ವಜನಿಕರಿಂದಲೇ, ಲಾಕ್ ಡೌನ್ ಮಾಡಿದರೆ ಒಳ್ಳೆಯದಪ್ಪಾ ಎಂಬ ಪ್ರತಿಕ್ರಿಯೇ ಕೇಳಿ ಬರ್ತಿದೆ. ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ, ಜಾರಿಗೊಳಿಸಲಾಗುತ್ತಿರುವ ಲಾಕ್ ಡೌನ್ ಶಿವಮೊಗ್ಗದಲ್ಲಿಯೂ ವಿಸ್ತರಿಸಬೇಕೆಂಬ ಮನವಿ ಸಾರ್ವಜನಿಕರಿಂದ ಬಂದಿದೆ. ಈಗಾಗಲೇ, ನಗರದಲ್ಲಿನ ವರ್ತಕರ ಸಂಘದ ವತಿಯಿಂದ, ಬೆಳಿಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಸ್ವಯಂ ನಿರ್ಬಂಧ ಹಾಕಿಕೊಳ್ಳಲಾಗಿದೆ. ಸೋಂಕು ನಿಯಂತ್ರಣಕ್ಕೆ ಬರುವವರೆಗೂ, ನಾಗರೀಕರ ಆರೋಗ್ಯದ ದೃಷ್ಟಿಯಿಂದ, ಲಾಕ್ ಡೌನ್ ಅನಿವಾರ್ಯವಾಗಿದೆ. ಪ್ರಸ್ತುತ ನಗರದಾದ್ಯಂತ, ಸಮುದಾಯದಲ್ಲಿ ಸೋಂಕು ವ್ಯಾಪಿಸುತ್ತಿದ್ದು, ಈ ಎಲ್ಲಾ ಹಿನ್ನೆಲೆಯಲ್ಲಿ, ನಾಳೆ ಮಂಗಳವಾರ ಜಿಲ್ಲಾಡಳಿತದ ಜೊತೆ ಚರ್ಚಿಸಿ, ಲಾಕ್ ಡೌನ್ ಬೇಕೆ ಬೇಡವೇ ಎಂಬುದರ ಬಗ್ಗೆ ತೀರ್ಮಾನಿಸುವುದಾಗಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ತೀರ್ಮಾನ ಮಾಡಲಾಗಿದ್ದು, ಈಗಾಗಲೇ, ಬೆಂಗಳೂರಿನಲ್ಲಿ ಲಾಕ್ ಡೌನ್ ಮಾಡಲಾಗಿದೆ. ಅದೇರೀತಿ, ಕರ್ನಾಟಕದಲ್ಲಿ ಸಹ ಕೊರೋನಾ ಸೋಂಕು ಹೆಚ್ಚುತ್ತಿದೆ. ಶಿವಮೊಗ್ಗದಲ್ಲೂ ಕೂಡ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರು ಹೆಚ್ಚಾಗುತ್ತಿದ್ದಾರೆ. ಹೀಗಾಗಿ, ಶಿವಮೊಗ್ಗದಲ್ಲಿ ವರ್ತಕರೇ ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನ ಬಂದ್ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ ಎಂದು ಈಶ್ವರಪ್ಪ ಹೇಳಿದ್ದಾರೆ. ಈ ಬಗ್ಗೆ ಕೂಲಂಕುಷವಾಗಿ, ಶಿವಮೊಗ್ಗ ಜಿಲ್ಲೆ ಲಾಕ್ ಡೌನ್ ಕುರಿತು ನಾಳೆ ಜಿಲ್ಲಾಧಿಕಾರಿ ಜೊತೆ ಚರ್ಚೆ ನಡೆಸುತ್ತೇನೆ. ಚರ್ಚೆಯ ಬಳಿಕ ಲಾಕ್ ಡೌನ್ ಮಾಡಬೇಕಾ. ಅಥವಾ ಬೇಡವಾ ಎಂಬುದರ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತೆ ಅಂತಾ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿಯೂ ಲಾಕ್ ಡೌನ್ ಗೆ ಚಿಂತನೆ – ಸಚಿವ ಕೆ.ಎಸ್. ಈಶ್ವರಪ್ಪ
RELATED ARTICLES
Recent Comments
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಷ್ಟಕ್ಕೂ ಕಲಂ 370, 35(ಎ)ರ ಅಡಿಯಲ್ಲಿ ಜಮ್ಮು-ಕಾಶ್ಮೀರಕ್ಕೆ ಸಿಕ್ಕಿದ್ದ ವಿಶೇಷ ಸವಲತ್ತುಗಳೇನು? ಅದರ ಇತಿಹಾಸವೇನು?
on ಜೈಲಿನಲ್ಲಿ ಖೈದಿಗಳ ಎಡವಟ್ಟು : ಕೇಕ್ ತಯಾರಿಸಲು ತಂದಿದ್ದ ಎಸೆನ್ಸ್ ಕುಡಿದು ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ !
on Makar Sankranti 2024: ಮಕರ ಸಂಕ್ರಾಂತಿ ಹಬ್ಬದ ವಿಶೇಷತೆಗಳೇನು..? ಈ ದಿನ ಎಳ್ಳಿಗೆ ಯಾಕೆ ಮಹತ್ವ? ಇಲ್ಲಿದೆ ಮಾಹಿತಿ
on ಅಭಿವೃದ್ಧಿ ಮಾಡ್ತೀನಿ ಅನ್ನೋದು ಓಕೆ, ಮಗನನ್ನು ಗೆಲ್ಲಿಸಿದ್ರೆ ಅಭಿವೃದ್ಧಿ ಅನ್ನೋದೇಕೆ? : ಸಿಎಂಗೆ ಸುಮಲತಾ ಪ್ರಶ್ನೆ..!


