ಬೆಂಗಳೂರು: ಪಾದರಾಯನಪುರದಲ್ಲಿ ಗಲಭೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು,‘ ಪಾದರಾಯನಪುರದಲ್ಲಿ ನಡೆದಿರುವ ಘಟನೆ ತುಂಬಾ ದುರಾದೃಷ್ಟಕರವಾಗಿದೆ. ಇಂತಹ ಘಟನೆಗಳು ಪುನಾರ್ವರ್ತನೆಯಾಗದಂತೆ ತಡೆಯಬೇಕಾದರೆ ಈ ದುಷ್ಕೃತ್ಯದಲ್ಲಿ ತೊಡಗಿದವರನ್ನು ಗುರುತಿಸಿ ಶಿಕ್ಷಿಸಬೇಕು‘ ಎಂದು ಒತ್ತಾಯಿಸಿದ್ದಾರೆ.
ಕೊರೋನಾ ವಾರಿಯರ್ಸ್ ತಮ್ಮ ಜೀವ ಪಣಕ್ಕಿಟ್ಟು ಕೆಲಸ ಮಾಡ್ತಿದ್ದಾರೆ. ನಮ್ಮ ರಕ್ಷಿಸಲು ಹಗಲು ರಾತ್ರಿ ದುಡಿಯುತ್ತಿದ್ದಾರೆ.ಹಾಗಾಗಿ ಅವರಿಗೆ ಸಹಕಾರ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಜನರು ಗಾಳಿ ಸುದ್ದಿಯಿಂದ ಪ್ರಚೋದನೆಗೆ ಒಳಗಾಗದೆ ಆರೋಗ್ಯ ಸಿಬ್ಬಂದಿ ಜೊತೆ ಸಂಯಮದಿಂದ ವರ್ತಿಸಬೇಕು ಎಂದು ಹೇಳಿದ್ದಾರೆ.
ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ.
ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು @CMofKarnataka ಅವರನ್ನು ಒತ್ತಾಯಿಸುತ್ತೇನೆ.#coronavirusinindia
1/2— Siddaramaiah (@siddaramaiah) April 20, 2020
ಕೊರೊನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ.
ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ.ಗಾಳಿ ಸುದ್ದಿಯಿಂದ ಪ್ರಚೋದನೆಗೊಳಗಾಗದೆ ಜನ ಸಂಯಮದಿಂದ ವರ್ತಿಸಬೇಕೆಂದು ರಾಜ್ಯದ ಜನರಲ್ಲಿ ಮನವಿ ಮಾಡುತ್ತೇನೆ.
2/2#coronavirusinindia— Siddaramaiah (@siddaramaiah) April 20, 2020