ಮಾರ್ಚ್ 12ರಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಏಕದಿನ ಸರಣಿ ಆರಂಭವಾಗಲಿದೆ. ಮೊದಲ ಮ್ಯಾಚ್ ಧರ್ಮಶಾಲಾದಲ್ಲಿ ನಡೆಯಲಿದೆ. ಅದೇ ಟೈಮಲ್ಲಿ ಮಾರ್ಚ್ 9ರಿಂದ 13ರವರೆಗೆ ರಣಜಿ ಫೈನಲ್ ಜರುಗಲಿದೆ. ಸೌರಾಷ್ಟ್ರ ಮತ್ತು ಬಂಗಾಳ ಫೈನಲ್ನಲ್ಲಿ ಸೆಣೆಸಲಿವೆ. ಪ್ರಶಸ್ತಿಗೆ ಮುತ್ತಿಕ್ಕಲು ಅಭ್ಯಾಸ ನಿರತವಾಗಿರುವ ಸೌರಾಷ್ಟ್ರ ಟೀಮ್ ಇಂಡಿಯಾದ ಪ್ರಮುಖ ಆಲ್ರೌಂಡರ್ ರವೀಂದ್ರ ಜಡೇನಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಪ್ಲ್ಯಾನ್ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಜಯದೇವ್ ಶಾ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ, ಮೊದಲ ಏಕದಿನ ಪಂದ್ಯದಿಂದ ಜಡೇಜಾ ಅವರನ್ನು ಬಿಟ್ಟು, ರಣಜಿ ಆಡಲು ಅವಕಾಶ ಕೊಡ್ಬೇಕು ಅಂತ ಮನವಿ ಮಾಡಿದ್ದರು. ಆ ಮನವಿಯನ್ನು ತಿರಸ್ಕರಿಸಿರುವ ಸೌರವ್ ಗಂಗೂಲಿ, ದೇಶ ಮೊದಲು, ದೇಸಿ ಟೂರ್ನಿಗಾಗಿ ರಾಷ್ಟ್ರೀಯ ತಂಡದಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ , ಭಾರತ ಪ್ರತಿನಿಧಿಸುವ ತಂಡ ಬಲಾಡ್ಯವಾಗಿರಬೇಕು ಅಂತ ಹೇಳಿದ್ದಾರೆ.
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
ಕೊರೊನ ನಡುವೆಯೇ ನಾಳೆಯಿಂದ ರಾಜ್ಯಾದ್ಯಂತ ಕೆ-ಸಿಇಟಿ ಪರೀಕ್ಷೆ , ಕೊರೊನ ಪಾಸಿಟಿವ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದು
on