ಯಾದಗಿರಿ: ರಾಜ್ಯದಲ್ಲಿ ಕೋರೋನಾ ವೈರಸ್ ಭೀತಿ ಹೆಚ್ಚಾಗುತ್ತಿದ್ದಂತೆ ಜನರಲ್ಲಿ ಆತಂಕವೂ ಹೆಚ್ಚಿದೆ. ಪಕ್ಕದಲ್ಲಿ ಯಾರೂ ಕೆಮ್ಮಂಗಿಲ್ಲ, ಸೀನಂಗಿಲ್ಲ ಕೊರೋನಾ ಅಂತ ಹೇಳಿ ಮಾರುದ್ದ ಓಡುತ್ತಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ಪಿಯುಸಿ ವಿದ್ಯಾರ್ಥಿಯೊಬ್ಬನನ್ನು ಪರೀಕ್ಷೆ ಬರೆಯುವಾಗ ಕೆಮ್ಮಿದ ಅನ್ನೋ ಕಾರಣಕ್ಕೆ ಕೊಠಡಿಯಿಂದ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ್ದಾರೆ.
ಬುಧವಾರ ನಡೆದ ದ್ವಿತೀಯ ಪಿಯುಸಿಯ ಅರ್ಥಶಾಸ್ತ್ರ ಪರೀಕ್ಷೆ ವೇಳೆ ವಿದ್ಯಾರ್ಥಿಯೊಬ್ಬ ಪದೇ ಪದೇ ಕೆಮ್ಮುತ್ತಿದ್ದ. ಹಾಗಾಗಿ ಆತನಿಂದ ಬೇರೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆಂದು ಆತನನ್ನು ಕಾಲೇಜು ಆವರಣದಲ್ಲಿ ಕೂರಿಸಿ ಪರೀಕ್ಷೆ ಬರೆಸಿದ್ದಾರೆ. ಬಳಿಕ ಆ ವಿದ್ಯಾರ್ಥಿಯ ಆರೋಗ್ಯ ತಪಾಸಣೆಯನ್ನು ಮಾಡಿಸಿದ್ದಾರೆ. ಆದರೆ ಆತನಲ್ಲಿ ಕೊರೋನಾದ ಯಾವ ಲಕ್ಷಣಗಳು ಕಂಡು ಬಂದಿಲ್ಲ.
buy zithromax 250 mg online
zithromax 250mg tablets