ಕೊರೋನಾ ಇಡೀ ವಿಶ್ವದಲ್ಲಿ ಕೋಲಾಹಲ ಸೃಷ್ಟಿಸಿದೆ. ಈ ಮಹಾಮಾರಿಗೆ ಎಲ್ಲರೂ ಆತಂಕಗೊಂಡಿದ್ದಾರೆ. ಸರ್ಕಾರ, ಆರೋಗ್ಯ ಇಲಾಖೆ, ಮಾಧ್ಯಮಗಳು ಸಾಕಷ್ಟು ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿವೆ. ಅಂತೆಯೇ ಕ್ರಿಕೆಟಿಗರಾದ ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಕನ್ನಡಿಗರಾದ ಕೆ.ಎಲ್ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಸಹ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ.
ಕ್ಯಾಪ್ಟನ್ ಕೊಹ್ಲಿ, ”ಧೈರ್ಯವಾಗಿ ಕೊರೋನಾವನ್ನು ಎದುರಿಸೋಣ. ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳೋಣ. ಸುರಕ್ಷಿತವಾಗಿರೋಣ” ಎಂದು ಟ್ವೀಟ್ ಮಾಡಿದ್ದಾರೆ.
ಟೀಮ್ ಇಂಡಿಯಾದ ಭವಿಷ್ಯದ ನಾಯಕ ಎಂದೇ ಬಿಂಬಿತವಾಗಿರುವ ಕನ್ನಡಿಗ ಕೆ.ಎಲ್ ರಾಹುಲ್, ” ಇಂಥಾ ಸಮಯದಲ್ಲಿ ಪ್ರತಿಯೊಬ್ಬರೂ ಧೈರ್ಯವಾಗಿರೋಣ. ಒಬ್ಬರಿಗೊಬ್ಬರು ಜಾಗ್ರತೆ ವಹಿಸೋಣ. ಆರೋಗ್ಯ ತಜ್ಞರ (ವೈದ್ಯರ) ಸೂಚನೆಗಳನ್ನು ಪಾಲಿಸೋಣ. ಸುರಕ್ಷಿತವಾಗಿರೋಣ” ಎಂಬ ಸಂದೇಶವನ್ನು ಟ್ವೀಟ್ ಮೂಲಕ ಹರಿಬಿಟ್ಟಿದ್ದಾರೆ.
ಇನ್ನೊಬ್ಬ ಕನ್ನಡಿಗ ಮಯಾಂಕ್ ಅಗರ್ ವಾಲ್ ಸ್ವಚ್ಛವಾಗಿರಿ ಎಂದು, ”ಕೈ ತೊಳೆಯಿರಿ, ಜನಸಂದಣಿಯಿಂದ ಸಾಧ್ಯವಾದಷ್ಟು ದೂರವಿರಿ, ಹುಷಾರಿಲ್ಲ ಅನ್ನಿಸಿದರೆ ಮನೆಯಲ್ಲೇ ವಿಶ್ರಾಂತಿ ಪಡೆಯಿರಿ, ವಾಟ್ಸ್ಆ್ಯಪ್ ಸಂದೇಶಗಳನ್ನು ನಂಬಬೇಡಿ, ಭಯಪಡಬೇಡಿ – ಕೈ ತೊಳೆಯಿರಿ” ಎಂದು ಟ್ವೀಟ್ ಮಾಡಿದ್ದಾರೆ.
ಕೊರೋನಾ ಬಗ್ಗೆ ಕೊಹ್ಲಿ, ರಾಹುಲ್, ಮಯಾಂಕ್ ಜಾಗೃತಿ ಟ್ವೀಟ್..!
LEAVE A REPLY
Recent Comments
‘ಗಂಡ ಸತ್ತು 2 ತಿಂಗಳು ಕಳೆದಿಲ್ಲ, ರಾಜಕೀಯ ಬೇಕಿತ್ತಾ’? : ಸುಮಲತಾ ವಿರುದ್ಧ ನಾಲಿಗೆ ಹರಿಬಿಟ್ಟ ಹೆಚ್.ಡಿ ರೇವಣ್ಣ..!
on
ಭಾರತ ದಾಳಿ ಮಾಡಿದ್ರೆ ಪ್ರತ್ಯುತ್ತರ ನೀಡುತ್ತಂತೆ ಪಾಕ್..! ಹಳೇ ರಾಗಕ್ಕೆ ತಾಳ ಹಾಕಿದ ರಣಹೇಡಿ ರಾಷ್ಟ್ರದ ಪ್ರಧಾನಿ..!
on
ಶವವಂಚಕ!
on
zithromax 250 mg online
zithromax no prescription